ಮುಳಬಾಗಿಲು: ಕೋಲಾರ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಮ್ಮ ಮತ್ತು ಕಾಂಗ್ರೆಸ್ ಬ್ಲಾಕ್ ಘಟಕದ ಅಧ್ಯಕ್ಷ ಆನಂದರೆಡ್ಡಿ ಅವರ ಪುತ್ರ ರಂಜಿತ್ ರೆಡ್ಡಿ (20) ತಮಿಳುನಾಡಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಶನಿವಾರ ಮೃತಪಟ್ಟಿದ್ದಾರೆ.
ಬೆಂಗಳೂರಿನ ರೇವಾ ಕಾಲೇಜಿನ ಅಂತಿಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದ ರಂಜಿತ್, ಬೈಕ್ನಲ್ಲಿ ತಮಿಳುನಾಡಿಗೆ ಹೋಗಿದ್ದರು. ಕೃಷ್ಣಗಿರಿ ಬಳಿ ಅಪಘಾತ ಸಂಭವಿಸಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.