ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಮೇಶ್ವರ್ ವಿರುದ್ಧ ವಿಧಾನ ಪರಿಷತ್‌ ಸದಸ್ಯ ಲಿಂಗಪ್ಪ ವಾಗ್ದಾಳಿ

Last Updated 5 ಜೂನ್ 2018, 6:47 IST
ಅಕ್ಷರ ಗಾತ್ರ

ರಾಮನಗರ:ಕೆಪಿಸಿಸಿ ಅಧ್ಯಕ್ಷ ಜಿ .ಪರಮೇಶ್ವರ್ ಕಾಂಗ್ರೆಸ್‌ಅನ್ನು ಅಧೋಗತಿಗೆ ತರುತ್ತಿದ್ದು, ನಮ್ಮ ಹೆಂಡತಿ ಮಕ್ಕಳನ್ನೂ ಮಾರಲು ಹೊರಟಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎಂ. ಲಿಂಗಪ್ಪ ಕಿಡಿಕಾರಿದರು.

ಅವರಿಗೆ ಉಪಮುಖ್ಯಮಂತ್ರಿ ಆಗಿದ್ದೇ ಹೆಚ್ಚು ಎಂಬಂತೆ ಆಗಿದೆ. ಮುಂದೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು. ಮುಖ್ಯಮಂತ್ರಿ ಆಗಬೇಕು‌ ಎಂಬ ಗುರಿ ಇಲ್ಲ. ರಾಮನಗರ ಸೇರಿದಂತೆ ಹಲವು ಕ್ಷೇತ್ರಗಳನ್ನು ಮಾರಲು ಹೊರಟಿದ್ದಾರೆ. ಅದಕ್ಕೆ ಅವಕಾಶ ನೀಡುವುದಿಲ್ಲ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.

ಡಿ.ಕೆ. ಶಿವಕುಮಾರ್‌ಗೆ ಮಂತ್ರಿ ಸ್ಥಾನ ಕೊಡಬೇಡಿ ಎಂದು ಹೇಳುವಷ್ಟು ಧೈರ್ಯ ಯಾವ ರಾಜಕಾರಣಿಗೂ ಇಲ್ಲ. ಆದರೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ತಪ್ಪಿಸಲು ಪಕ್ಷದೊಳಗೇ ಸಂಚು ನಡೆದಿರುವುದು ನಿಜ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT