‘ಸ್ವಾಮೀಜಿಗಳು ರಾಜಕೀಯ ಹೇಳಿಕೆ ನೀಡಬಾರದು’ ಎಂಬ ಬಸವರಾಜ ಹೊರಟ್ಟಿ ಹೇಳಿಕೆಗೆ ಮಂಗಳವಾರ ಇಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ‘ಕರ್ನಾಟಕದಲ್ಲಿ ವೀರಶೈವ– ಲಿಂಗಾಯತ ಪ್ರಶ್ನೆಯೇ ಇರಲಿಲ್ಲ. ಆದರೆ, ಹೊರಟ್ಟಿ ಅವರು, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಅನೇಕ ಸ್ವಾಮೀಜಿಗಳನ್ನು ಕರೆತಂದು ರಾಜಕೀಯ ಮಾಡಲು ಯತ್ನಿಸಿದರು. ಇದರಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದವರು ಚುನಾವಣೆಯಲ್ಲಿ ಹೊಡೆತ ತಿಂದರು’ ಎಂದು ಹೇಳಿದರು.