ವಿಚಾರಣೆ ವೇಳೆ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎ.ಎಸ್.ಪೊನ್ನಣ್ಣ ವಾದ ಮಂಡಿಸಿ, ‘ಅರ್ಜಿದಾರರು ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವವರು. ಇವರನ್ನು ರಕ್ಷಣೆ ಮಾಡುವ ಅಗತ್ಯವಿದೆ. ಅಷ್ಟಕ್ಕೂ ಈಗಾಗಲೇ ನೇಮಕಾತಿ ಪ್ರಕ್ರಿಯೆ ಬಹಳಷ್ಟು ಮುಂದುವರಿದ್ದು ಅಂತಿಮ ಹಂತದಲ್ಲಿರುವಾಗ ಇವರನ್ನು ಕೈಬಿಡುವುದು ಅನ್ಯಾಯವಾಗುತ್ತದೆ’ ಎಂದು ನ್ಯಾಯಪೀಠಕ್ಕೆ ವಿವರಿಸಿದರು.