ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಅಕ್ರಮ ಮುಚ್ಚಿಹಾಕಲು ಇಂಧನ ಖಾತೆಗೆ ಪಟ್ಟು’

ಡಿ.ಕೆ.ಶಿವಕುಮಾರ್ ವಿರುದ್ಧ ಶೋಭಾ ಕರಂದ್ಲಾಜೆ ವಾಗ್ದಾಳಿ
Last Updated 5 ಜೂನ್ 2018, 19:30 IST
ಅಕ್ಷರ ಗಾತ್ರ

ಮಂಗಳೂರು: ‘ರಾಜ್ಯದಲ್ಲಿ ಅತ್ಯಂತ ಕೆಟ್ಟದಾಗಿ ಇಂಧನ ಖಾತೆ ನಿರ್ವಹಿಸಿದ ಕೀರ್ತಿ ಹಿಂದಿನ ಕಾಂಗ್ರೆಸ್ ಸರ್ಕಾರದ್ದು. ಈ ಅವಧಿಯಲ್ಲಿ ನಡೆದಿರುವ ಅಕ್ರಮಗಳನ್ನು ಮುಚ್ಚಿಹಾಕಲು ಆಗಿನ ಇಂಧನ ಸಚಿವರು ಅದೇ ಖಾತೆಗೆ ಪಟ್ಟು ಹಿಡಿದಿದ್ದಾರೆ’ ಎಂದು ಸಂಸದೆ ಶೋಭಾ ಕರಂದ್ಲಾಜೆ ಅವರು ಕಾಂಗ್ರೆಸ್ ಶಾಸಕ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.

ಇಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನನಗಿಂತ ಹಿಂದೆ ಇಂಧನ ಸಚಿವರಾಗಿದ್ದವರು ಹೇಗೆ ಆ ಖಾತೆ ನಿರ್ವಹಿಸಿದ್ದರು ಎಂಬುದು ನನಗೆ ಗೊತ್ತಿದೆ. ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಇಂಧನ ಖಾತೆಯಲ್ಲಿ ದೊಡ್ಡ ಪ್ರಮಾಣದ ಅಕ್ರಮಗಳು ನಡೆದಿವೆ’ ಎಂದರು.

ಹೊಸಬರು ಇಂಧನ ಖಾತೆ ಸಚಿವರಾದರೆ ಅಕ್ರಮಗಳನ್ನು ಪತ್ತೆ ಮಾಡಬಹುದು ಎಂಬ ಭಯ ಹಿಂದಿನ ಸಚಿವರಿಗೆ ಇದೆ. ಈ ಕಾರಣಕ್ಕಾಗಿಯೇ ಇಂಧನ ಖಾತೆಗೆ ಪಟ್ಟು ಹಿಡಿದಿದ್ದಾರೆ. ಇಂಧನ ಖಾತೆಯಲ್ಲಿ ’ಪವರ್‌’ ಮತ್ತು ‘ಶಾಕ್‌’ ಎರಡೂ ಇದೆ ಎಂದು ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT