ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಆಹಾರ ಸಚಿವ ಸೂರ್ಯ ರಾಯ್ ಅವರು ವಿಸ್ತೃತ ವರದಿ ನೀಡುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ. ಮಂಗರಗಡಿ ಗ್ರಾಮದಲ್ಲಿ ವಾಸವಿದ್ದ ಮಹಿಳೆಯ ಕುಟುಂಬಕ್ಕೆ ಸ್ಥಳೀಯ ನ್ಯಾಯಬೆಲೆ ಅಂಗಡಿಯಲ್ಲಿ ಆಹಾರಧಾನ್ಯ ನಿರಾಕರಿಸಲಾಗಿತ್ತು. 2012ರಲ್ಲಿ ಅವರ ರೇಷನ್ ಕಾರ್ಡ್ ರದ್ದುಗೊಂಡಿತ್ತು. ಶನಿವಾರ ಮೃತಪಟ್ಟ ಮಹಿಳೆಯು, ಮೂರು ದಿನಗಳಿಂದ ಊಟ ಮಾಡಿರಲಿಲ್ಲ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.