ಗಾಯದ ಕಾರಣ ಸಿಂಧು ಈ ಬಾರಿಯ ಉಬರ್ ಕಪ್ ಟೂರ್ನಿಯಲ್ಲಿ ಆಡಿರಲಿಲ್ಲ. ಈ ಕುರಿತು ಪ್ರತಿಕ್ರಿಯಿಸಿದ ರಮಣ, ‘ಸಿಂಧು ಈಗ ಸಂಪೂರ್ಣವಾಗಿ ಗುಣಮುಖವಾಗಿದ್ದಾಳೆ. ಈ ತಿಂಗಳು ನಡೆಯುವ ಮಲೇಷ್ಯಾ ಓಪನ್ ಟೂರ್ನಿಯಲ್ಲಿ ಕಣಕ್ಕಿಳಿಯುತ್ತಾಳೆ. ಇಂಡೊನೇಷ್ಯಾ ಮತ್ತು ಥಾಯ್ಲೆಂಡ್ ಓಪನ್ ಟೂರ್ನಿಗಳಲ್ಲೂ ಭಾಗವಹಿಸಲಿದ್ದಾಳೆ. ವಿಶ್ವ ಚಾಂಪಿಯನ್ಷಿಪ್ಗೆ ವಿಶೇಷ ತರಬೇತಿ ಪಡೆಯಲು ನಿರ್ಧರಿಸಿದ್ದು, ಈ ಕಾರಣದಿಂದಾಗಿ ಸಿಂಗಪುರ ಓಪನ್ನಿಂದ ಹಿಂದೆ ಸರಿಯಲು ತೀರ್ಮಾನಿಸಿದ್ದಾಳೆ’ ಎಂದರು.