ನ್ಯೂಯಾರ್ಕ್ನಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಸಂದರ್ಭದಲ್ಲಿ ಪಾಕಿಸ್ತಾನದ ವಿದೇಶಾಂಗ ಸಚಿವರ ಜತೆಗೆ ನಿಗದಿಯಾಗಿದ್ದ ಸಭೆ ರದ್ದಾದ ಬಳಿಕ ಪ್ರಧಾನಿ ಈ ಕಟು ಎಚ್ಚರಿಕೆ ನೀಡಿದ್ದಾರೆ. ಭಾರತ–ಪಾಕಿಸ್ತಾನ ಗಡಿಯಲ್ಲಿ ಭಾರತದ ಸೈನಿಕರ ಕ್ರೂರ ಹತ್ಯೆಗೆ ಪ್ರತಿಭಟನೆಯಾಗಿ ಮಾತುಕತೆಯನ್ನು ಭಾರತ ರದ್ದುಪಡಿಸಿತ್ತು. ಭಯೋತ್ಪಾದನೆ ಮತ್ತು ಮಾತುಕತೆ ಜತೆಯಾಗಿ ಸಾಗದು ಎಂಬ ಸ್ಪಷ್ಟ ಸಂದೇಶವನ್ನು ಈ ಮೂಲಕ ಭಾರತ ನೀಡಿದೆ.