‘ಹೈದರಾಬಾದ್ ಕರ್ನಾಟಕ, ಮೈಸೂರು, ಬೆಂಗಳೂರು ಹಾಗೂ ದಾವಣಗೆರೆ ವಿಭಾಗಗಳಲ್ಲ್ಲೂ ಈ ಸಭೆಗಳು ಜರುಗಲಿವೆ. 2011ರ ಜನಗಣತಿ ಪ್ರಕಾರ ರಾಜ್ಯದಲ್ಲಿ 4 ಲಕ್ಷ ಅಂಗವಿಕಲ ಮಕ್ಕಳು ಇದ್ದಾರೆ ಎಂಬ ಮಾಹಿತಿ ಇದೆ. ಆದರೆ ಇಲಾಖೆಗಳ ಮಾಹಿತಿಗೂ, ಆಯೋಗ ಖುದ್ದು ನಡೆಸಿದ ಸಮೀಕ್ಷೆಯ ಅಂಕಿಸಂಖ್ಯೆಗೂ ಸಾಕಷ್ಟು ವ್ಯತ್ಯಾಸವಿದೆ. ಹೀಗಾಗಿ ಆಯೋಗವೇ ನೇರವಾಗಿ ಇಂಥ ಸಭೆಗಳ ಮೂಲಕ ಮಾಹಿತಿ ಕಲೆಹಾಕುತ್ತಿದೆ. ಆ ಮೂಲಕ ಅಂಗವಿಕಲ ಮಕ್ಕಳಿಗೆ ಸಲ್ಲಬೇಕಾದ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ತಲುಪಿಸುವ ಉದ್ದೇಶ ಹೊಂದಿದೆ’ ಎಂದು ಕೃಪಾ ತಿಳಿಸಿದರು.