ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ: ರಾಜಭವನಕ್ಕೆ ಪ್ರವೇಶ ಸಿಗದೆ ಹಿಂದಿರುಗಿದ ಸಭಾಧ್ಯಕ್ಷ ರಮೇಶ್‌ ಕುಮಾರ್‌

ಪ್ರತಿಭಟಿಸಿ ಮುಖ್ಯಕಾರ್ಯದರ್ಶಿಗೆ ಪತ್ರ
Last Updated 6 ಜೂನ್ 2018, 13:34 IST
ಅಕ್ಷರ ಗಾತ್ರ

ಬೆಂಗಳೂರು: ನೂತನ ಸಚಿವರ ಪ್ರಮಾಣ ವಚನ ಸಮಾರಂಭಕ್ಕಾಗಿ ರಾಜಭವನದ ಮುಂದೆ ಅರ್ಧ ತಾಸು ಕಾದು ಪ್ರವೇಶ ಸಿಗದೆ, ವಿಧಾನ ಸಭೆ ಸಭಾಧ್ಯಕ್ಷ ಕೆ.ಆರ್‌.ರಮೇಶ್‌ ಕುಮಾರ್‌ ಹಿಂದಿರುಗಿದ ಘಟನೆ ನಡೆದಿದೆ.

ಈ ಕುರಿತು ಪ್ರತಿಭಟನೆ ವ್ಯಕ್ತಪಡಿಸಿರುವ ರಮೇಶ್‌ ಕುಮಾರ್‌, ರಾಜ್ಯ ಮುಖ್ಯ ಕಾರ್ಯದರ್ಶಿಗೆ ಪತ್ರ ರವಾನಿಸಿದ್ದಾರೆ.

‘ಇಡೀ ಸರ್ಕಾರಿ ವ್ಯವಸ್ಥೆ ಸಭಾಧ್ಯಕ್ಷರಿಗೆ ಹಾಗೂ ಸಭಾಪತಿಗಳಿಗೆ ಗೌರವಯುತ ವ್ಯವಸ್ಥೆ ಮಾಡುವುದು ಜವಾಬ್ದಾರಿಯಾಗಿರುತ್ತದೆ. ನಿಮ್ಮ ಅಧಿಕಾರಿಗಳ ದುರಹಂಕಾರ, ಅಜ್ಞಾನ ಹಾಗೂ ರಾಜಭವನದ ಒಳಗಿರುವ ಅಧಿಕಾರಿಗಳ ದುರಹಂಕಾರ ಇದಕ್ಕೆ ಕಾರಣ’ ಎಂದು ಪತ್ರ ಮುಖೇನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT