ಲಖನೌ: ಪತಂಜಲಿ ಆಯುರ್ವೇದ ಸಂಸ್ಥೆಯ ₹6,000 ಕೋಟಿ ವೆಚ್ಚದ ಫುಡ್ ಪಾರ್ಕ್ ಸ್ಥಾಪನೆ ಪ್ರಕ್ರಿಯೆಗೆ ಅಗತ್ಯ ಸಹಕಾರ ನೀಡುವಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಾಜ್ಯ ಸರ್ಕಾರದ ಅಸಹಕಾರದಿಂದ ರಾಜ್ಯದಲ್ಲಿ ಯೋಜನೆ ಸ್ಥಗಿತಗೊಳಿಸುವುದಾಗಿ ಸಂಸ್ಥೆ ಬೆದರಿಕೆ ಹಾಕಿದ ಬಳಿಕ ಯೋಗಿ ಈ ಸೂಚನೆ ನೀಡಿದ್ದಾರೆ.