‘ಸರ್ಕಾರ ಬಂದಾಗ, ಅಧಿಕಾರ ಬೇಕು ಎಂದು ಎಲ್ಲರೂ ಬಯಸುವುದು ಸಹಜ. ಆದರೆ, ಸಂದರ್ಭಕ್ಕೆ ಅನುಗುಣವಾಗಿ ತ್ಯಾಗ ಮನೋಭಾವ ಇರಬೇಕಾಗುತ್ತದೆ. ಸತೀಶ ಸಚಿವ ಸ್ಥಾನ ಕೇಳಿದ್ದರು. ಆದರೆ, ಹೈಕಮಾಂಡ್ ನನಗೆ ಕೊಟ್ಟಿದೆ. ಹಿಂದಿನ ಸರ್ಕಾರದ ಆರಂಭದಲ್ಲಿ ನನಗೆ ಸಚಿವ ಸ್ಥಾನ ಕೈತಪ್ಪಿತ್ತು. ಹಿರಿಯ ಶಾಸಕನಾಗಿದ್ದರೂ ನಾನು ಸುಮ್ಮನಿದ್ದೆ. ಯಾರಾದರೂ ಮಧ್ಯಸ್ಥಿಕೆ ವಹಿಸಿದರೆ ಈಗಲೂ ಅವರಿಗೆ ಗಾದಿ ಬಿಟ್ಟುಕೊಡಲು ಸಿದ್ಧವಿದ್ದೇನೆ’ ಎಂದು ಪ್ರತಿಕ್ರಿಯಿಸಿದರು.