ವೇದಿಕೆ ರಾಜ್ಯಾಧ್ಯಕ್ಷ ವಿಜಯ ತಳವಾರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಅರೆಬೆತ್ತಲೆಯಾಗಿ, ಹಳೆಯ ಮೂರು ಟೈರ್ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಸದಸ್ಯರು, ಕಾಂಗ್ರೆಸ್ ಪಕ್ಷದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ‘ಹಿರಿಯ ನಾಯಕನನ್ನು ಕಡೆಗಣಿಸುವ ಮೂಲಕ ಸಮಾಜಕ್ಕೆ ಅವಮಾನ ಮಾಡಲಾಗಿದೆ’ ಎಂದು ದೂರಿದರು.