<p><strong>ನಾಗ್ಪುರ:</strong> ಧರ್ಮ, ಸಿದ್ಧಾಂತ ಅಥವಾ ಅಸಹಿಷ್ಣುತೆ ಮೂಲಕ ಭಾರತವನ್ನು ವ್ಯಾಖ್ಯಾನಿಸುವ ಯಾವುದೇ ಪ್ರಯತ್ನ ದೇಶದ ಅಸ್ತಿತ್ವವನ್ನೇ ದುರ್ಬಲಗೊಳಿಸುತ್ತದೆ ಎಂದು ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಎಚ್ಚರಿಕೆ ನೀಡಿದ್ದಾರೆ.</p>.<p>ಸುಮಾರು 50 ವರ್ಷ ಕಾಲ ಜತೆಗಿದ್ದ ಕಾಂಗ್ರೆಸ್ ಪಕ್ಷ, ಮಗಳು ಶರ್ಮಿಷ್ಠಾ ಮತ್ತು ಇತರರ ತೀವ್ರ ಟೀಕೆಯ ನಡುವೆಯೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ಕಾರ್ಯಕರ್ತರ ಮೂರು ವರ್ಷದ ತರಬೇತಿಯ ಸಮಾರೋಪ ಕಾರ್ಯಕ್ರಮದಲ್ಲಿ ಪ್ರಣವ್ ಗುರುವಾರ ಭಾಗವಹಿಸಿದರು.</p>.<p>ವಿಶ್ವವಾದ, ಸಮನ್ವಯ ಮತ್ತು ಸಹಬಾಳ್ವೆಯಿಂದಲೇ ಭಾರತದ ರಾಷ್ಟ್ರೀಯತೆ ರೂಪುಗೊಂಡಿದೆ. ಹಾಗಾಗಿ ಅಸಹಿಷ್ಣುತೆ ರಾಷ್ಟ್ರೀಯತೆಯನ್ನು ದುರ್ಬಲಗೊಳಿಸುತ್ತದೆ ಎಂದು ಅವರು ವಿವರಿಸಿದರು.</p>.<p>‘ದೇಶ, ದೇಶೀಯತೆ ಮತ್ತು ದೇಶಪ್ರೇಮದ ಬಗ್ಗೆ ನನ್ನ ಗ್ರಹಿಕೆಯನ್ನು ಹಂಚಿಕೊಳ್ಳುವುದಕ್ಕಾಗಿ ನಾನು ಇಲ್ಲಿಗೆ ಬಂದಿದ್ದೇನೆ. ನಮ್ಮ ಸಾರ್ವಜನಿಕ ಸಂವಾದದಿಂದ ಎಲ್ಲ ರೀತಿಯ ಭಯ ಮತ್ತು ಹಿಂಸೆಯನ್ನು ತೊಡೆದು ಹಾಕಬೇಕು’ ಎಂದು ಅವರು ಹೇಳಿದರು.</p>.<p><strong>ಯಾರೂ ಅನ್ಯರಲ್ಲ:</strong> ಆರ್ಎಸ್ಎಸ್ ಕಾರ್ಯಕ್ರಮದಲ್ಲಿ ಪ್ರಣವ್ ಅವರ ಭಾಗವಹಿಸುವಿಕೆ ಬಗ್ಗೆ ನಡೆದ ಚರ್ಚೆ ಅರ್ಥಹೀನ. ಯಾಕೆಂದರೆ ಆರ್ಎಸ್ಎಸ್ಗೆ ಯಾರೂ ಹೊರಗಿನವರಲ್ಲ ಎಂದು ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದರು.</p>.<p><strong>ಹೆಡಗೇವಾರ್ಗೆ ಮೆಚ್ಚುಗೆ</strong><br /> ಆರ್ಎಸ್ಎಸ್ನ ಸ್ಥಾಪಕ ಕೇಶವ ಬಲಿರಾಮ್ ಹೆಡಗೇವಾರ್ ಅವರ ಹುಟ್ಟಿದ ಸ್ಥಳಕ್ಕೆ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಜತೆಗೆ ಪ್ರಣವ್ ಭೇಟಿ ನೀಡಿದರು.</p>.<p>ಅಲ್ಲಿನ ಸಂದರ್ಶಕರ ಪುಸ್ತಕದಲ್ಲಿ ‘ಭಾರತ ಮಾತೆಯ ಶ್ರೇಷ್ಠ ಪುತ್ರನಿಗೆ ಗೌರವ ಮತ್ತು ನಮನ ಸಲ್ಲಿಸುವುದಕ್ಕಾಗಿ ಇಲ್ಲಿಗೆ ಬಂದಿದ್ದೇನೆ’ ಎಂದು ಪ್ರಣವ್ ಬರೆದರು.</p>.<p>**</p>.<p>ಸಹಿಷ್ಣುತೆಯಿಂದಲೇ ನಾವು ಶಕ್ತಿ ಪಡೆದುಕೊಳ್ಳುತ್ತೇವೆ, ಬಹುತ್ವವನ್ನು ಗೌರವಿಸುತ್ತೇವೆ. ವೈವಿಧ್ಯವನ್ನು ಸಂಭ್ರಮಿಸುತ್ತೇವೆ<br /> <em><strong>– ಪ್ರಣವ್ ಮುಖರ್ಜಿ, ಮಾಜಿ ರಾಷ್ಟ್ರಪತಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗ್ಪುರ:</strong> ಧರ್ಮ, ಸಿದ್ಧಾಂತ ಅಥವಾ ಅಸಹಿಷ್ಣುತೆ ಮೂಲಕ ಭಾರತವನ್ನು ವ್ಯಾಖ್ಯಾನಿಸುವ ಯಾವುದೇ ಪ್ರಯತ್ನ ದೇಶದ ಅಸ್ತಿತ್ವವನ್ನೇ ದುರ್ಬಲಗೊಳಿಸುತ್ತದೆ ಎಂದು ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಎಚ್ಚರಿಕೆ ನೀಡಿದ್ದಾರೆ.</p>.<p>ಸುಮಾರು 50 ವರ್ಷ ಕಾಲ ಜತೆಗಿದ್ದ ಕಾಂಗ್ರೆಸ್ ಪಕ್ಷ, ಮಗಳು ಶರ್ಮಿಷ್ಠಾ ಮತ್ತು ಇತರರ ತೀವ್ರ ಟೀಕೆಯ ನಡುವೆಯೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ಕಾರ್ಯಕರ್ತರ ಮೂರು ವರ್ಷದ ತರಬೇತಿಯ ಸಮಾರೋಪ ಕಾರ್ಯಕ್ರಮದಲ್ಲಿ ಪ್ರಣವ್ ಗುರುವಾರ ಭಾಗವಹಿಸಿದರು.</p>.<p>ವಿಶ್ವವಾದ, ಸಮನ್ವಯ ಮತ್ತು ಸಹಬಾಳ್ವೆಯಿಂದಲೇ ಭಾರತದ ರಾಷ್ಟ್ರೀಯತೆ ರೂಪುಗೊಂಡಿದೆ. ಹಾಗಾಗಿ ಅಸಹಿಷ್ಣುತೆ ರಾಷ್ಟ್ರೀಯತೆಯನ್ನು ದುರ್ಬಲಗೊಳಿಸುತ್ತದೆ ಎಂದು ಅವರು ವಿವರಿಸಿದರು.</p>.<p>‘ದೇಶ, ದೇಶೀಯತೆ ಮತ್ತು ದೇಶಪ್ರೇಮದ ಬಗ್ಗೆ ನನ್ನ ಗ್ರಹಿಕೆಯನ್ನು ಹಂಚಿಕೊಳ್ಳುವುದಕ್ಕಾಗಿ ನಾನು ಇಲ್ಲಿಗೆ ಬಂದಿದ್ದೇನೆ. ನಮ್ಮ ಸಾರ್ವಜನಿಕ ಸಂವಾದದಿಂದ ಎಲ್ಲ ರೀತಿಯ ಭಯ ಮತ್ತು ಹಿಂಸೆಯನ್ನು ತೊಡೆದು ಹಾಕಬೇಕು’ ಎಂದು ಅವರು ಹೇಳಿದರು.</p>.<p><strong>ಯಾರೂ ಅನ್ಯರಲ್ಲ:</strong> ಆರ್ಎಸ್ಎಸ್ ಕಾರ್ಯಕ್ರಮದಲ್ಲಿ ಪ್ರಣವ್ ಅವರ ಭಾಗವಹಿಸುವಿಕೆ ಬಗ್ಗೆ ನಡೆದ ಚರ್ಚೆ ಅರ್ಥಹೀನ. ಯಾಕೆಂದರೆ ಆರ್ಎಸ್ಎಸ್ಗೆ ಯಾರೂ ಹೊರಗಿನವರಲ್ಲ ಎಂದು ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದರು.</p>.<p><strong>ಹೆಡಗೇವಾರ್ಗೆ ಮೆಚ್ಚುಗೆ</strong><br /> ಆರ್ಎಸ್ಎಸ್ನ ಸ್ಥಾಪಕ ಕೇಶವ ಬಲಿರಾಮ್ ಹೆಡಗೇವಾರ್ ಅವರ ಹುಟ್ಟಿದ ಸ್ಥಳಕ್ಕೆ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಜತೆಗೆ ಪ್ರಣವ್ ಭೇಟಿ ನೀಡಿದರು.</p>.<p>ಅಲ್ಲಿನ ಸಂದರ್ಶಕರ ಪುಸ್ತಕದಲ್ಲಿ ‘ಭಾರತ ಮಾತೆಯ ಶ್ರೇಷ್ಠ ಪುತ್ರನಿಗೆ ಗೌರವ ಮತ್ತು ನಮನ ಸಲ್ಲಿಸುವುದಕ್ಕಾಗಿ ಇಲ್ಲಿಗೆ ಬಂದಿದ್ದೇನೆ’ ಎಂದು ಪ್ರಣವ್ ಬರೆದರು.</p>.<p>**</p>.<p>ಸಹಿಷ್ಣುತೆಯಿಂದಲೇ ನಾವು ಶಕ್ತಿ ಪಡೆದುಕೊಳ್ಳುತ್ತೇವೆ, ಬಹುತ್ವವನ್ನು ಗೌರವಿಸುತ್ತೇವೆ. ವೈವಿಧ್ಯವನ್ನು ಸಂಭ್ರಮಿಸುತ್ತೇವೆ<br /> <em><strong>– ಪ್ರಣವ್ ಮುಖರ್ಜಿ, ಮಾಜಿ ರಾಷ್ಟ್ರಪತಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>