ಅಂತರ್ಜಲದ ಶೇ 70 ರಷ್ಟು ನೀರು ನೀರಾವರಿಗಾಗಿ ಬಳಕೆಯಾಗುತ್ತಿದ್ದು, ಕೆಲವು ಕಡೆಗಳಲ್ಲಿ ಅಂತರ್ಜಲ 1,500 ಅಡಿಗಳಷ್ಟು ಕುಸಿತ ಕಂಡಿದೆ. ಕಲ್ಲು ಪ್ರದೇಶಗಳಲ್ಲಿ ಕೊಳವೆಬಾವಿ ಕೊರೆಸಿದಾಗ ಶೇ 0.5 ರಷ್ಟು ಯೊಜನೆಗಳು ವಿಫಲವಾಗುತ್ತಿರುವುದರಿಂದ ರೈತರು ಆರ್ಥಿಕ ಹಿನ್ನಡೆ ಅನುಭವಿಸುತ್ತಿದ್ದಾರೆ ಎಂದು ವಿವರಿಸಿದರು.