ಇಂಧನ ಅಥವಾ ಲೋಕೋಪಯೋಗಿ ಖಾತೆ ಮೇಲೆ ಕಣ್ಣಿಟ್ಟಿದ್ದ ಜೆಡಿಎಸ್ನ ಹಿರಿಯ ಶಾಸಕ ಜಿ.ಟಿ.ದೇವೇಗೌಡ ಅವರಿಗೆ ಉನ್ನತ ಶಿಕ್ಷಣ ಖಾತೆ ನೀಡಲಾಗಿದೆ. ಖಾತೆ ಬಗ್ಗೆ ಜಿ.ಟಿ.ದೇವೇಗೌಡ ಅಸಮಾಧಾನಗೊಂಡಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. ಜೆಡಿಎಸ್ನಲ್ಲಿ ಎಚ್.ಡಿ. ದೇವೇಗೌಡ ಮತ್ತು ಕುಮಾರಸ್ವಾಮಿ ಅವರ ನಿಷ್ಠರಿಗೆ ಮಹತ್ವದ ಖಾತೆಗಳು ಸಿಕ್ಕಿವೆ. ಬಂಡೆಪ್ಪ ಕಾಶೆಂಪೂರ ಅವರಿಗೆ ಸಹಕಾರ, ಡಿ.ಸಿ.ತಮ್ಮಣ್ಣ ಅವರಿಗೆ ಸಾರಿಗೆ, ಸಾ.ರಾ.ಮಹೇಶ್ಗೆ ಪ್ರವಾಸೋದ್ಯಮ, ರೇಷ್ಮೆ, ತೋಟಗಾರಿಕೆ ನೀಡಲಾಗಿದೆ ಎಂಬ ಅತೃಪ್ತಿ ಹೊಗೆಯಾಡುತ್ತಿದೆ.