‘ಕಾಂಗ್ರೆಸ್–ಜೆಡಿಎಸ್ ಒಗ್ಗೂಡಿ ಚುನಾವಣೆ ಎದುರಿಸುವ ಬಗ್ಗೆ ಈಗಾಗಲೇ ಚರ್ಚೆ ನಡೆದಿದೆ. ಬಿಜೆಪಿ ಮತ್ತು ಆರ್ಎಸ್ಎಸ್ ಸಮಾಜ ವಿಭಜನೆ ಕೆಲಸ ಮಾಡುತ್ತಿವೆ. ಹೀಗಾಗಿ ಜಾತ್ಯತೀತ ತತ್ವ ಎತ್ತಿ ಹಿಡಿಯಲು, ಪ್ರಜಾಪ್ರಭುತ್ವ ಉಳಿಸಲು ಮತ್ತು ಸಂವಿಧಾನ ರಕ್ಷಿಸಲು ಒಟ್ಟಿಗೆ ಹೋಗುತ್ತೇವೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ‘ಜಾತ್ಯತೀತ ಶಕ್ತಿಗಳನ್ನು ಒಗ್ಗೂಡಿಸಲು ಸಮ್ಮಿಶ್ರ ಸರ್ಕಾರ ರಚಿಸಲಾಗಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೇ ಐದು ವರ್ಷ ಮುಖ್ಯಮಂತ್ರಿ ಆಗಿರುತ್ತಾರೆ. ಈ ವಿಷಯದಲ್ಲಿ ನಮ್ಮ ಅಭಿಪ್ರಾಯ ಬದಿಗಿಟ್ಟು, ಹೈಕಮಾಂಡ್ ಸೂತ್ರ ಪಾಲಿಸುತ್ತಿದ್ದೇವೆ’ ಎಂದು ತಿಳಿಸಿದರು.
*
ಕಾಂಗ್ರೆಸ್ನಲ್ಲಿ ಸಿದ್ದರಾಮಯ್ಯ ಮತ್ತು ಡಾ.ಜಿ.ಪರಮೇಶ್ವರ ಗುಂಪುಗಾರಿಕೆ ಮಾಡುತ್ತಿದ್ದಾರೆ ಎಂಬುದು ಊಹಾಪೋಹ. ಅವರಿಬ್ಬರೂ ಒಂದೇ ದಾರಿಯಲ್ಲಿ ಸಾಗುತ್ತಿದ್ದಾರೆ.
-ಮಲ್ಲಿಕಾರ್ಜುನ ಖರ್ಗೆ