ಪ್ರತ್ಯೇಕ ಧರ್ಮ ಹೋರಾಟದ ಬಳಿಕ ಪಾಟೀಲರ ವಿರುದ್ಧ ಮಹಾಸಭಾ ಹರಿಹಾಯ್ದಿತ್ತು. ಈಗ ಅವರಿಗೇ ಸಚಿವ ಸ್ಥಾನ ನೀಡುವಂತೆ ಪಟ್ಟು ಹಿಡಿದಿದೆ. ಈ ಸಂಬಂಧ ಮಹಾಸಭಾ ರಾಜ್ಯ ಘಟಕದ ಅಧ್ಯಕ್ಷ ತಿಪ್ಪಣ್ಣ ಅವರು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ‘ಸಚಿವ ಸಂಪುಟದಲ್ಲಿ ಸಮುದಾಯಕ್ಕೆ ಪ್ರಾತಿನಿಧ್ಯ ಸಿಕ್ಕಿಲ್ಲ ಎಂಬ ಭಾವನೆ ಬಲವಾಗಿದೆ. ಜತೆಗೆ, ಶಾಮನೂರು ಹಾಗೂ ಪಾಟೀಲರಿಗೆ ಸಚಿವ ಸ್ಥಾನ ನೀಡದಿರುವುದು ತಪ್ಪು ಸಂದೇಶ ನೀಡಿದಂತಾಗಿದೆ’ ಎಂದು ಅವರು ಮುಖ್ಯಮಂತ್ರಿ ಗಮನಕ್ಕೆ ತಂದರು.