ಡಯಟ್ನಲ್ಲಿ ಪ್ರಸಕ್ತ ಸಾಲಿನ ’ಚಿಂತನಾಶೀಲ ಚಟುವಟಿಕೆಗಳ ದಾಖಲೀಕರಣದ ಕೃತಿ ದರ್ಪಣ’ ಬಿಡುಗಡೆಗೊಳಿಸಿ ಮಾತನಾಡಿದ ಅವರು, ‘ವಿದ್ಯಾರ್ಥಿಗಳಲ್ಲಿ ಕನಿಷ್ಠ ಕಲಿಕೆಯೂ ಸಾಧ್ಯವಾಗದೇ ಇರುವುದನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಇಲಾಖೆಯ ಎಲ್ಲಾ ಹಂತದ ಅಧಿಕಾರಿಗಳು ನಿತ್ಯವೂ ಶಾಲಾ ಸಂದರ್ಶನ ಮಾಡುವುದನ್ನು ಕಡ್ಡಯಗೊಳಿಸಲಾಗಿದ್ದು, ವಿಶೇಷವಾಗಿ ತರಗತಿ ಪರಿಶೀಲನೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಇಲಾಖೆಯ ಉಳಿವು ವಿದ್ಯಾರ್ಥಿಗಳ ಗುಣಮಟ್ಟದ ಕಲಿಕೆಯನ್ನೇ ಅವಲಂಬಿಸಿದೆ’ ಎಂದರು.