ದೂರವಾಣಿ ಮೂಲಕ ಮಾತನಾಡಿದ ಅವರು ‘ಸಚಿವನಾದ ನಂತರ ನನ್ನ ಮನೆ ದೇವರು ತ್ರಿಪುರ ಸುಂದರಿ ಅಮ್ಮನವರಿಗೆ ಪೂಜೆ ಸಲ್ಲಿಸಲು ಮೂಗೂರು ಗ್ರಾಮಕ್ಕೆ ಬಂದಿದ್ದೇನೆ. ಸಣ್ಣ ನೀರಾವರಿ ಖಾತೆ ನೀಡಿರುವುದಕ್ಕೆ ನನಗೆ ಬೇಸರವಿಲ್ಲ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಬೇಕು ಎಂಬುದು ನಮ್ಮೆಲ್ಲರ ಉದ್ದೇಶವಾಗಿತ್ತು. ಅದರಂತೆ ಮುಖ್ಯಮಂತ್ರಿಯಾಗಿದ್ದಾರೆ. ನಾನು ಸಚಿವ ಸ್ಥಾನ ನೀಡುವಂತೆ ಮನವಿಯನ್ನೂ ಮಾಡಿರಲಿಲ್ಲ. ಆದರೂ ಸ್ಥಾನ ನೀಡಿದ್ದಾರೆ, ಸಣ್ಣದು, ದೊಡ್ಡದು ಎಂದು ತಾರತಮ್ಯ ಮಾಡುವುದಿಲ್ಲ. ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಎಲ್ಲೂ ಹೇಳಿಲ್ಲ’ ಎಂದು ಸ್ಪಷ್ಟಪಡಿಸಿದರು.