ಕಾಂಗ್ರೆಸ್ನವರೇ ಆಗಿದ್ದ ಎಚ್.ವಿ. ಚಂದ್ರು ಅವರು ಈ ಮೊದಲು ಅಧ್ಯಕ್ಷರಾಗಿದ್ದರು. ಪಕ್ಷದ ಆಂತರಿಕ ಒಪ್ಪಂದದಂತೆ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರಿಂದ ಆ ಸ್ಥಾನ ತೆರವಾಗಿತ್ತು. ಹೊಸ ಅಧ್ಯಕ್ಷರಾಗಲು ದೊಡ್ಡಮ್ಮ ಅವರು ನಾಮಪತ್ರ ಸಲ್ಲಿಸಿದ್ದರು. ಅಧ್ಯಕ್ಷರ ಆಯ್ಕೆಗಾಗಿ ಮೇ 31ರಂದು ಜಿಲ್ಲಾ ಪಂಚಾಯಿತಿ ಸಭೆ ಕರೆಯಲಾಗಿತ್ತು. ಆದರೆ, ಬಿಜೆಪಿಯ ಎಲ್ಲ ಸದಸ್ಯರೂ ಗೈರು ಹಾಜರಾಗಿದ್ದರಿಂದ ಕೋರಂ ಅಭಾವ ಸೃಷ್ಟಿಯಾಗಿಯಾಗಿ ಸಭೆ ರದ್ದುಗೊಂಡಿತ್ತು. ಆ ನಂತರ ಸಭೆಯನ್ನು ಶುಕ್ರವಾರಕ್ಕೆ ಮುಂದೂಡಲಾಗಿತ್ತು.