ಹೆಸ್ಕಾಂ ಎಇಇ ವಿನಾಯಕ ಪೇಟ್ಕರ್ ಮಾತನಾಡಿ, ‘ಲೈನ್ಮನ್ಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು, ಪೋನ್ ಕರೆ ಸ್ವೀಕರಿಸಲು ಅಗತ್ಯ ಸೂಚನೆ ನೀಡಲಾಗುವುದು. ಎಲ್ಲ ಗ್ರಾಮ ಪಂಚಾಯ್ತಿಗಳಲ್ಲಿ ಲೈನ್ಮನ್ಗಳ ಸಂಪರ್ಕ ಸಂಖ್ಯೆ ಪ್ರಕಟಿಸಲಾಗುವುದು’ ಎಂದರು. ಕಳೆದ ವರ್ಷ ಇಂಧನ ಇಲಾಖೆಯಿಂದ ನೀಡಿದ ಎಲ್ಇಡಿ ಬಲ್ಬ್ಗಳು ದೋಷಪೂರಿತವಾಗಿವೆ ಎಂಬ ದೂರಿನ ಹಿನ್ನೆಲೆಯಲ್ಲಿ, ಅಂತಹವುಗಳನ್ನು ಬದಲಿಸಿಕೊಡಲು ಇಲಾಖೆ ನಿರ್ಧರಿಸಿದೆ. ಕೇಂದ್ರ ಸರ್ಕಾರದ ಸೌಭಾಗ್ಯ ಯೋಜನೆ ಜಾರಿಯಾಗಿದ್ದು, 2019ರ ಒಳಗೆ ಯಾವ ಮನೆಯೂ ವಿದ್ಯುತ್ ಸಂಪರ್ಕದಿಂದ ವಂಚಿತವಾಗಿರಬಾರದು ಎಂದು ಪ್ರತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಫಲಾನುಭವಿಗಳ ಪಟ್ಟಿ ನೀಡಲು ಸಂಬಂಧಿಸಿದ ಪಿಡಿಒಗಳಿಗೆ ಸೂಚಿಸಲಾಗಿದೆ. ಪಂಡಿತ ದೀನ ದಯಾಳ್ ಯೋಜನೆಯಲ್ಲಿದ್ದ ಫಲಾನುಭವಿಗಳನ್ನು ಹೊರತುಪಡಿಸಿ ಉಳಿದವರಿಗೆ ಈ ಯೋಜನೆ ಅನ್ವಯವಾಗಲಿದೆ ಎಂದು ಹೇಳಿದರು.