ತುಮಕೂರು: ‘ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರವು ರಾಜ್ಯಕ್ಕೆ ಉತ್ತಮ ಆಡಳಿತ ನೀಡಬೇಕು. ಒಳ್ಳೆಯ ಕೆಲಸಗಳನ್ನು ಮಾಡಬೇಕು’ ಎಂದು ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದರು.
ಶನಿವಾರ ನಗರದಲ್ಲಿ ನಡೆದ ಜಿಲ್ಲಾ ಮಾಧ್ವ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಬಂದಿದ್ದ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.
‘ಯಾವುದೇ ಸರ್ಕಾರ ಇದ್ದರೂ ಒಳ್ಳೆಯದನ್ನು ಮಾಡಬೇಕು. ನಾವು ಬಯಸುವುದು ಅದನ್ನೇ. ಕಳೆದ ವರ್ಷ ಮಠದಲ್ಲಿ ಇಫ್ತಾರ್ ಕೂಟ ಆಯೋಜಿಸಿದ್ದೆವು. ಈ ವರ್ಷ ನಾವು ಪ್ರವಾಸದಲ್ಲಿರುವ ಕಾರಣ ಆಯೋಜನೆ ಸಾಧ್ಯವಾಗುತ್ತಿಲ್ಲ’ ಎಂದು ಪ್ರತಿಕ್ರಿಯಿಸಿದರು.