ವಿಧಾನಸಭಾ ಚುನಾವಣೆಯಲ್ಲಿ ಕುರುಬ ಸಮಾಜ ಶೇ 80ರಷ್ಟು ಕಾಂಗ್ರೆಸ್ಗೆ ಮತ ನೀಡಿದೆ. ಆದರೆ, ಕಾಂಗ್ರೆಸ್ ತನ್ನ ಮಂತ್ರಿಮಂಡಲದಲ್ಲಿ ಕುರುಬ ಸಮಾಜದ ಒಬ್ಬರಿಗೂ ಅವಕಾಶ ನೀಡಿಲ್ಲ. ಇದು ಖಂಡನೀಯ. ಇದು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಮತ್ತು ಹೈಕಮಾಂಡ್ನ ನಿರ್ಲಕ್ಷ್ಯ, ವೈಫಲ್ಯವಾಗಿದೆ. ಸಿದ್ದರಾಮಯ್ಯ ಅವರು ತಕ್ಷಣ ಗಮನ ಹರಿಸಿ ಉತ್ತರ ಮತ್ತು ದಕ್ಷಿಣ ಭಾಗಕ್ಕೆ ಕುರುಬ ಸಮಾಜದ ಇಬ್ಬರಿಗೆ ಮಂತ್ರಿ ಮಂಡಲದಲ್ಲಿ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.