ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾಂದಲೆ ನಡೆಸಿದವರ ಬಂಧಿಸಲು ಆಗ್ರಹಿಸಿ ಪ್ರತಿಭಟನೆ

Last Updated 4 ಅಕ್ಟೋಬರ್ 2018, 12:30 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ರಾಣಿ ಚನ್ನಮ್ಮ‌ ವಿಶ್ವವಿದ್ಯಾಲಯದಲ್ಲಿ ಈಚೆಗೆ ದಾಂದಲೆ ನಡೆಸಿದ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಬಿಜೆಪಿ ಯಮಕನಮರಡಿ ಘಟಕದ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಗುರುವಾರ ಪ್ರತಿಭಟನೆ ನಡೆಸಿದರು.

ಬಿಜೆಪಿ ಮುಖಂಡ ಮಾರುತಿ ಅಷ್ಟಗಿ ಮಾತನಾಡಿ, ‘ಶಾಸಕ ಸತೀಶ ಜಾರಕಿಹೊಳಿ ಬೆಂಬಲಿಗರು ಕುಲಪತಿ ಹಾಗೂ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿರುವುದು, ದಾಂದಲೆ ಮಾಡಿರುವುದು ಖಂಡನೀಯ. ಆರೋಪಿಗಳನ್ನು ಪೊಲೀಸರು ಬಂಧಿಸಿ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

‘ಪೊಲೀಸ್ ಅಧಿಕಾರಿಗಳು ರಾಜಕೀಯ ಒತ್ತಡಕ್ಕೆ ಮಣಿಯದೇ, ಸ್ವಯಂ ದೂರು ದಾಖಲಿಸಿಕೊಂಡು ಕ್ರಮ ವಹಿಸಬೇಕು. ಮುಂದೆ ಇಂತಹ ಘಟನೆಗಳಿಗೆ ಅವಕಾಶ ನೀಡಬಾರದು’ ಎಂದು ಒತ್ತಾಯಿಸಿದರು.

ಮುಖಂಡರಾದ ಸಂತೋಷ ಮಲಾಜಿ, ರುದ್ರಗೌಡ ಪಾಟೀಲ, ಬಸವರಾಜ ಶೇಖನವರ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT