ಆದರೂ, ಇಲಾಖೆ ಸಿಬ್ಬಂದಿ ಸಸಿಗಳನ್ನು ನೆಟ್ಟಿದ್ದರು. ಇದರಿಂದ ಅಸಮಾಧಾನಗೊಂಡ ಗ್ರಾಮಸ್ಥರಾದ ಮೋಹನ್, ಚನ್ನೇಗೌಡ, ಹುಚ್ಚಯ್ಯ, ಜಗ್ಗ, ರಾಜಣ್ಣ ಅವರು ನೆಟ್ಟಿದ ಗಿಡಗಳನ್ನು ಬುಡಸಮೇತ ಕಿತ್ತು ನಾಶಪಡಿಸಿದ್ದಾರೆ. ಈ ಕುರಿತು ಅಮೃತೂರು ಪೊಲೀಸ್ ಠಾಣೆಯಲ್ಲಿ ವಲಯ ಅರಣ್ಯಾಧಿಕಾರಿ ಶೈಲಾ ದೂರು ದಾಖಲಿಸಿದ್ದಾರೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.