‘ಈ ಶೈಕ್ಷಣಿಕ ಸಾಲಿನಿಂದಲೇ ಪ್ರವೇಶಾತಿ ಪಡೆಯಬಹುದು. ರಾಜ್ಯದ ಹುತಾತ್ಮ ಸೈನಿಕರ ಮಕ್ಕಳಿಗೆ ಮೊದಲ ಆದ್ಯತೆ ನೀಡಲಾಗುವುದು. ವಿ.ವಿ ವ್ಯಾಪ್ತಿಯ ಸರ್ಕಾರಿ, ಖಾಸಗಿ, ಸ್ವಾಯತ್ತ ಕಾಲೇಜುಗಳಲ್ಲಿಯೂ ಶುಲ್ಕದಲ್ಲಿ ವಿನಾಯಿತಿ ಲಭಿಸಲಿದೆ’ ಎಂದು ಮೈಸೂರು ವಿಶ್ವವಿದ್ಯಾಲಯದ ಕುಲಸಚಿವೆ ಡಿ.ಭಾರತಿ ‘ಪ್ರಜಾವಾಣಿ’ಗೆ ತಿಳಿಸಿದರು.