ಬಾದಾಮಿ ತಾಲ್ಲೂಕು ನೀಲಗುಂದದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಭಿನ್ನಮತದ ಬಗ್ಗೆ ಹೈಕಮಾಂಡ್ ಜೊತೆಯೂ ಮಾತನಾಡಿದ್ದೇನೆ. ಈ ವಿಚಾರದಲ್ಲಿ ದೆಹಲಿಯಿಂದ ನನಗೆ ಯಾವುದೇ ಕರೆ ಬಂದಿಲ್ಲ. ಹಾಗಾಗಿ ಅಲ್ಲಿಗೆ ಹೋಗಿಲ್ಲ. ಫೋನ್ ಮೂಲಕವೇ ಚರ್ಚಿಸಿದ್ದೇನೆ. ಕೆಪಿಸಿಸಿ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ಗಾಂಧಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಆ ಬಗ್ಗೆ ಕರೆದು ಕೇಳಿದರೆ ನನ್ನ ಅಭಿಪ್ರಾಯ ತಿಳಿಸುವೆ’ ಎಂದು ತಿಳಿಸಿದರು.