‘ಸಾಮಾಜಿಕ ಮಾಧ್ಯಮಗಳಲ್ಲಿ ಹಬ್ಬಿರುವ ವದಂತಿಯಿಂದ ಆತಂಕ ಸೃಷ್ಟಿಯಾಗಿ ಈ ರೀತಿಯ ಅಹಿತಕರ ಘಟನೆಗಳು ನಡೆಯುತ್ತಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿರುವವರಲ್ಲಿ ಒಬ್ಬ, ಸಾಮಾಜಿಕ ಜಾಲತಾಣಗಳ ಮೂಲಕ ಮಕ್ಕಳ ಕಳ್ಳರು ಅಸ್ಸಾಂ ಪ್ರವೇಶಿಸಿದ್ದಾರೆ ಎನ್ನುವ ವದಂತಿ ಹರಡಿದ್ದ’ ಎಂದು ಪೊಲೀಸ್ ಮಹಾನಿರ್ದೇಶಕ ಕುಲಧರ್ ಸೈಕಿಯಾ ತಿಳಿಸಿದ್ದಾರೆ.