ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಈ ಕುರಿತು ವಿವರಿಸಿ, ‘ಕೇಂದ್ರದಿಂದ ಕಡತ ವಾಪಸು ಬಂದಿದೆಯೇ ಅಥವಾ ಇಲ್ಲವೇ ಎಂಬುದು ಇನ್ನೂ ಖಚಿತವಾಗಿಲ್ಲ. ಒಂದು ವೇಳೆ ಬಂದಿದ್ದರೆ ಅದು ಕೇಂದ್ರ ಮಾಡಿರುವ ರಾಜಕೀಯ ಎಂದು ಪರಿಗಣಿಸಬೇಕಾಗುತ್ತದೆ. ಈ ಸಂಬಂಧ ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟ ಸಮಿತಿ ಸಭೆ ಸೇರಿ ತೀರ್ಮಾನ ತೆಗೆದುಕೊಳ್ಳುತ್ತದೆ’ ಎಂದಿದ್ದಾರೆ.