‘ಹಲ್ಲೆ ಖಂಡಿಸಿ, ಕುಂದಗೋಳ ಹಾಗೂ ಕಲಘಟಗಿಯಲ್ಲೂ ಬಂದ್ ನಡೆಯಲಿದೆ. ಇದರ ಜತೆಗೆ ಬೇಕರಿ, ಕಾಂಡಿಮೆಂಟ್ಸ್ ಹಾಗೂ ಟೀ ಮಾರಾಟ ಮಾಡುವ ಡಬ್ಬಿ ಅಂಗಡಿಗಳ ಮಾಲೀಕರು ಕೂಡ ಸ್ವಯಂಪ್ರೇರಣೆಯಿಂದ ತಮ್ಮ ಅಂಗಡಿಗಳನ್ನು ಬಂದ್ ಮಾಡಲಿದ್ದಾರೆ. ಬೆಳಿಗ್ಗೆ 10.30ಕ್ಕೆ ಮರಾಠಾ ಗಲ್ಲಿಯಲ್ಲಿರುವ ಸಂಘದ ಕಚೇರಿಯಿಂದ ದುರ್ಗದ ಬೈಲ್, ದಾಜಿಬಾನ ಪೇಟೆ ಮಾರ್ಗವಾಗಿ ಮಿನಿ ವಿಧಾನಸೌಧದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ತಹಶೀಲ್ದಾರ್ಗೆ ಮನವಿ ಸಲ್ಲಿಸಲಾಗುವುದು’ ಎಂದು ಹುಬ್ಬಳ್ಳಿ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಕೃಷ್ಣಮೂರ್ತಿ ಉಚ್ಚಿಲ ‘ಪ್ರಜಾವಾಣಿ’ಗೆ ತಿಳಿಸಿದರು.