ಚರಂಡಿ ನಿರ್ಮಾಣಕ್ಕಾಗಿ ಸಾಕಷ್ಟು ಅನುದಾನ ಖರ್ಚು ಮಾಡಿದರು ಪ್ರಯೋಜನವಾಗಿಲ್ಲ. ಹೀಗಾಗಿ ಜನರು ಚರಂಡಿ ನೀರಿನಿಂದ ಬೇಸತ್ತು ಹೋಗಿದ್ದಾರೆ. 3 ತಿಂಗಳ ಹಿಂದೆ ಅಫಜಲಪುರ ಪಟ್ಟಣದಲ್ಲಿ ಒಳ ಚರಂಡಿ ವ್ಯವಸ್ಥೆ ಮಾಡುವುದು ಮತ್ತು ಮಾಸ್ಟರ್ ಪ್ಲ್ಯಾನ್ ಮಾಡುವುದಕ್ಕಾಗಿ ಸಮೀಕ್ಷೆ ನಡೆಸಲಾಗಿತ್ತು. ಸದ್ಯಕ್ಕೆ ವಿಭಾಗೀಯ ಅಧಿಕಾರಿಗಳಾಗಿರುವ ಪಂಕಜ ಕುಮಾರ ಪಾಂಡೆ ಅಧಿಕಾರ ವಹಿಸಿಕೊಂಡಿದ್ದು, ಮಾಸ್ಟರ್ ಪ್ಲ್ಯಾನ್ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದರು.