‘ಬಹು ಗ್ರಾಮ ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಸಮೀಪದ ಖಂಡೇರಾಯನಹಳ್ಳಿಯಲ್ಲಿ ನೀರು ಶುದ್ಧೀಕರಣ ಘಟಕ ಇದೆ. ಆದರೆ, ಆ ನೀರು ಕುಡಿಯಲು ಯೋಗ್ಯವಾಗಿಲ್ಲ. ಅಲ್ಲದೇ, ನದಿಯ ನೀರು ಮಣ್ಣು ಮಿಶ್ರಿತ ವಾಗಿದ್ದು, ಕುಡಿಯಲು ಅಸಾಧ್ಯವಾಗಿದೆ. ಹೀಗಾಗಿ ಶುದ್ಧ ಕುಡಿಯವ ನೀರಿನ ಘಟಕ ಅಗತ್ಯವಾಗಿ ಬೇಕಾಗಿದೆ’ ಎನ್ನುತ್ತಾರೆ ಶಿಕ್ಷಕ ರವಿ ಮುದಿಗೌಡ್ರ.