‘ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಮಹಿಳೆಯರು, ಹಿರಿಯರು ಇಲ್ಲಿ ನಡೆದುಕೊಂಡು ಹೋಗಲೂ ಕಷ್ಟವಾಗುವಂತಹ ಪರಿಸ್ಥಿತಿಯಿದೆ. ಮಳೆಗಾಲ ಆರಂಭಕ್ಕೂ ಮೊದಲೇ ಇದನ್ನು ಸರಿಪಡಿಸಿ ಅನುಕೂಲ ಮಾಡಿಕೊಡಬೇಕಿತ್ತು. ಆದರೆ, ಇನ್ನೂ ಅದೇ ಸ್ಥಿತಿಯಿದೆ. ಹೀಗಾದರೆ ನಾವು ನೀಡಿದ ಮನವಿಗಳು, ಕಟ್ಟುವ ತೆರಿಗೆಗೆ ಬೆಲೆಯೇ ಇಲ್ಲವೇ’ ಎಂದು ಸ್ಥಳೀಯರು ಪ್ರಶ್ನಿಸುತ್ತಾರೆ.