ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ಸಂಸ್ಥೆಯು ಗುತ್ತಿಗೆ ಪಡೆದು ರೈಲು ಮಾರ್ಗದ ಸರ್ವೆ ಕಾರ್ಯ ಕೈಗೊಂಡಿದೆ. ಮಹಾರಾಷ್ಟ್ರ ರಾಜ್ಯದ ನೋಂದಾಯಿತ ವಾಹನದಲ್ಲಿ ಶ್ರೀಮಂಗಲ ಭಾಗಕ್ಕೆ ಆಗಮಿಸಿರುವ 8 ಮಂದಿ ಸಿಬ್ಬಂದಿ ಜಿಪಿಎಸ್ ಹಾಗೂ ಇತರ ಪರಿಕರಗಳನ್ನು ಬಳಸಿ ಸರ್ವೆ ನಡೆಸುತ್ತಿದ್ದಾರೆ. ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ಸಂಸ್ಥೆಯ ಆದರ್ಶ ಕೌಶಲ, ಅಗರ್ವಾಲ್ ನೇತೃತ್ವದಲ್ಲಿ ಸರ್ವೆ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ. ಈಗಾಗಲೇ ಕುಟ್ಟ ವ್ಯಾಪ್ತಿಯಲ್ಲಿ ಸರ್ವೆ ಕಾರ್ಯ ಮುಗಿದಿದೆ ಎನ್ನಲಾಗುತ್ತಿದೆ.