‘ಪ್ರತಿಭಾನ್ವಿತರು’ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಲು ಸನ್ನದ್ಧರಾಗಿದ್ದಾರೆ. ಹಾಗಾಗಿ ಹಿರಿಯ ಶ್ರೇಣಿಯ ಅಧಿಕಾರಶಾಹಿ ಹುದ್ದೆಗಳಿಗೆ ಖಾಸಗಿ ವಲಯದಿಂದ ಅರ್ಹರನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ಆದರೆ, ವಿರೋಧ ಪಕ್ಷಗಳು ಈ ಕ್ರಮಮವನ್ನು ಪ್ರಶ್ನಿಸುತ್ತಿವೆ. ತನ್ನ ಬೆಂಬಲಿಗರನ್ನು ಆಡಳಿತಾತ್ಮಕ ಹುದ್ದೆಗಳಲ್ಲಿ ಸೇರಿಸಿಕೊಳ್ಳುವ ಗುರಿಯನ್ನು ಬಿಜೆಪಿ ಹೊಂದಿದೆ ಎಂದು ಆರೋಪಿಸುತ್ತಿವೆ. ಆದರೆ, ಈ ನಿರ್ಧಾರದಲ್ಲಿ ಯಾವುದೇ ರಾಜಕೀಯ ಹಿತಾಸಕ್ತಿ ಇಲ್ಲ’ ಎಂದು ತಿಳಿಸಿದರು.