ಬೆಂಗಳೂರು: ‘ರಾಜಕೀಯ ನಾಯಕರ ಹಿಂಬಾಲಕರಿಗೆ ಸಿಂಡಿಕೇಟ್ ಸದಸ್ಯತ್ವ ನೀಡುವುದಿಲ್ಲ. ಅರ್ಹ ಶಿಕ್ಷಣ ತಜ್ಞರನ್ನು ಈ ಹುದ್ದೆಗಳಿಗೆ ನೇಮಿಸಲಾಗುವುದು’ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಹೇಳಿದರು.
ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ನಡೆದ ಡಾ. ಬಿ.ಆರ್.ಅಂಬೇಡ್ಕರ್ ಅವರ 127ನೇ ಜನ್ಮದಿನಾಚರಣೆ ಹಾಗೂ ಅಂಬೇಡ್ಕರ್ ಸೇವಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಜನಪದ ಗಾಯಕ ಗೊಲ್ಲಹಳ್ಳಿ ಶ್ರೀನಿವಾಸ್, ಸಾಲುಮರದ ತಿಮ್ಮಕ್ಕ ಹಾಗೂ ಲೇಖಕ ಕೆ.ರಾಮಯ್ಯ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.