ಸೇತುವೆಯನ್ನು ಪುರಸಭೆಯ ಎಸ್ಎಫ್ಸಿ ಯೋಜನೆಯಡಿಯಲ್ಲಿ ಸುಮಾರು ₹ 20 ಲಕ್ಷ ಅನುದಾನದಲ್ಲಿ ಎರಡು ವರ್ಷಗಳ ಹಿಂದೆ ನಿರ್ಮಿಸಲಾಗಿತ್ತು. ಆದರೆ, ನಿರ್ಮಿಸಿದ 8 ತಿಂಗಳಲ್ಲಿ ಅಂದರೆ; ಕಳೆದ ವರ್ಷ ಅಕ್ಟೋಬರ್ನಲ್ಲಿ ಭಾರಿ ಮಳೆಗೆ ಕೊಚ್ಚಿ ಹೋಗಿತ್ತು. ಬಳಿಕ ತಾತ್ಕಾಲಿಕವಾಗಿ ನಿರ್ಮಿಸಿದ್ದ ಸೇತುವೆಯು ಈಗ ಮಳೆಗೆ ಕೊಚ್ಚಿಕೊಂಡು ಹೋಗಿದೆ. ರೈತರು, ಸಾರ್ವಜನಿಕರು ಹೊಲಗಳಿಗೆ ತೆರಳಲು ಪರದಾಡುವಂತಾಗಿದೆ.