ಇಲ್ಲಿನ ತಮ್ಮ ನಿವಾಸದಲ್ಲಿ ಬುಧವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ‘ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್ನ ಪಾಲಿನ ಇನ್ನೂ ಆರು ಸಚಿವ ಸ್ಥಾನಗಳು ಭರ್ತಿಯಾಗಬೇಕಾಗಿದೆ. ಎರಡನೇ ಹಂತದ ವಿಸ್ತರಣೆಯಲ್ಲಿ ಸಚಿವ ಸ್ಥಾನ ಬೇಡವೆಂದು ಈಗಾಗಲೇ ಸ್ಪಷ್ಟ ಪಡಿಸಿದ್ದೇನೆ. ಆದರೆ, ನನ್ನ ಬೆಂಬಲಕ್ಕೆ ಇರುವ 15 ಜನ ಶಾಸಕರ ಪೈಕಿ ಕೆಲವರಿಗೆ ಸಚಿವ ಸ್ಥಾನ ದೊರಕಿಸಿಕೊಡಲು ಪ್ರಯತ್ನ ನಡೆಸಿದ್ದೇನೆ’ ಎಂದು ಹೇಳಿದರು.