ಧಾರವಾಡ: ‘ಪ್ರಸಕ್ತ ಸಾಲಿನ ಮುಂಗಾರು ಪೂರ್ವ ಹಾಗೂ ನಂತರದಲ್ಲಿ ಸುರಿದ ಮಳೆಯಿಂದಾಗಿ ಬೆಳಗಾವಿ ವಿಭಾಗದ ಏಳು ಜಿಲ್ಲೆಗಳಲ್ಲಿ 28 ಜನ ಮೃತಪಟ್ಟಿದ್ದು, 2,246 ಮನೆಗಳಿಗೆ ಹಾನಿಯಾಗಿದೆ. ಇವರಿಗೆ ಪರಿಹಾರ ನೀಡುವಲ್ಲಿ ಯಾವುದೇ ವಿಳಂಬವಾಗಬಾರದು’ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ, ಅಧಿಕಾರಿಗಳಿಗೆ ಸೂಚಿಸಿದರು.