‘ನಗರದ ಹೊರವಲಯದ ಫಿಲ್ಟರ್ ಬೆಡ್ ಕೆರೆಯಲ್ಲಿ ಸಂಗ್ರಹವಾಗಿದ್ದ ನೀರನ್ನು ಮೂರು ದಿನಕ್ಕೆ ಒಮ್ಮೆ ಪೂರೈಸಲಾಗುತ್ತಿತ್ತು. ವಿದ್ಯುತ್ ಸಮಸ್ಯೆಯಿಂದ ಸಮರ್ಪಕವಾಗಿ ನೀರು ಸರಬರಾಜು ಮಾಡಲು ಆಗುತ್ತಿಲ್ಲ. ಮಳೆಗೆ ಕಂಬಗಳು ಬಿದ್ದಿವೆ. ವಿದ್ಯುತ್ ತಂತಿಗೆ ತಾಗಿದ ಮರಗಳನ್ನು ಕತ್ತರಿಸಲು ಅರಣ್ಯ ಇಲಾಖೆಯ ಪರವಾನಗಿ ಬೇಕು. ಹೀಗೆ ಹಲವು ಸಬೂಬುಗಳನ್ನು ಜೆಸ್ಕಾಂ ಎಂಜಿನಿಯರ್ ಹೇಳುತ್ತಾರೆ.
ಇದರಿಂದ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ. ಸಮರ್ಪಕವಾಗಿ ವಿದ್ಯುತ್ ಪೂರೈಸಿದರೆ ಸಮಸ್ಯೆ ಉಂಟಾಗುವುದಿಲ್ಲ. ಇದಕ್ಕೆ ನೇರ ಹೊಣೆ ಜೆಸ್ಕಾಂ ಅಧಿಕಾರಿ’ ಎಂದು ನಗರಸಭೆ ಪೌರಾಯುಕ್ತ ಬಸವರಾಜ ಶಿವಪೂಜೆ ತಿಳಿಸಿದರು.