ಬಿಇಒ ಎಸ್.ಎನ್.ಹಳ್ಳಿಗುಡಿ ಮಾತನಾಡಿ, ‘ತಾಲ್ಲೂಕಿನಲ್ಲಿರುವ ಎಲ್ಲ ಶಾಲೆಗಳಿಗೂ ಶುದ್ಧ ಕುಡಿಯುವ ನೀರಿನ ಅವಶ್ಯವಿದ್ದು, ಪ್ರತಿ ಶಾಲೆಯಲ್ಲೂ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಬೇಕು. ತಾಲ್ಲೂಕಿನಾದ್ಯಂತ ಸುಮಾರು 80 ಶಾಲೆಗಳು ಶಿಥಿಲಗೊಂಡಿದ್ದು, ಅವುಗಳನ್ನು ನೆಲಸಮಗೊಳಿಸಿ ಹೊಸ ಕಟ್ಟಡ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು. ಅದಕ್ಕೆ ಜಿಲ್ಲಾ ಪಂಚಾಯ್ತಿ ಅನುಮೋದನೆ ನೀಡಬೇಕಿದೆ’ ಎಂದು ತಿಳಿಸಿದರು.