ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂ.ಬಿ.ಪಾಟೀಲ ಜತೆ ಮನಸ್ತಾಪ ಇಲ್ಲ: ಸಚಿವ ಶಿವಾನಂದ ಪಾಟೀಲ್‌

Last Updated 13 ಜೂನ್ 2018, 19:30 IST
ಅಕ್ಷರ ಗಾತ್ರ

ವಿಜಯಪುರ: ‘ಬಬಲೇಶ್ವರ ಶಾಸಕ ಎಂ.ಬಿ.ಪಾಟೀಲ ಜತೆ ನಮ್ಮದೇನು ಜಗಳವಿಲ್ಲ. ಅವರಿಗಾಗಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ ಬಿಟ್ಟುಕೊಟ್ಟು, ಬಸವನಬಾಗೇವಾಡಿಗೆ ಬಂದವನು ನಾನು’ ಎಂದು ಆರೋಗ್ಯ ಸಚಿವ ಶಿವಾನಂದ ಎಸ್‌.ಪಾಟೀಲ ಹೇಳಿದರು.

‘ಎಂ.ಬಿ.ಪಾಟೀಲ ಜಲಸಂಪನ್ಮೂಲ ಸಚಿವರಾಗಿದ್ದಾಗ, ಅವರಿಗೆ ಹೆಗಲಿಗೆ ಹೆಗಲು ಕೊಟ್ಟು ಜಿಲ್ಲೆಯ ಸಂಪೂರ್ಣ ನೀರಾವರಿಗಾಗಿ, ಸ್ವಾರ್ಥ ಬದಿಗಿಟ್ಟು ಸಹಕಾರ ಕೊಟ್ಟಿದ್ದೇವೆ. ಆದರೂ ಹೋದ ಎಲ್ಲೆಡೆ ಪತ್ರಕರ್ತರಷ್ಟೇ ಈ ವಿಷಯವನ್ನು ಪದೇ ಪದೇ ಏಕೆ ಕೇಳುತ್ತಾರೆ ಎಂಬುದೇ ಗೊತ್ತಾಗ್ತಿಲ್ಲ’ ಎಂದು ಬುಧವಾರ ರಾತ್ರಿ ನಗರದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಸಚಿವರು ಬೇಸರ ವ್ಯಕ್ತಪಡಿಸಿದರು.

‘ಅಧಿಕಾರ ಯಾರಿಗೂ ಶಾಶ್ವತವಲ್ಲ. ಜಿಲ್ಲಾ ಉಸ್ತುವಾರಿ ಸಚಿವರಾಗಿ, ಜಲ
ಸಂಪನ್ಮೂಲ ಸಚಿವರಾಗಿ ಎಂ.ಬಿ.ಪಾಟೀಲ ಜಿಲ್ಲೆಯಲ್ಲಿ ಈ ಹಿಂದಿನ ಅವಧಿಯಲ್ಲಿ ಕೈಗೊಂಡಿದ್ದ ಎಲ್ಲಾ ಅಭಿವೃದ್ಧಿ ಕಾರ್ಯಗಳನ್ನು ಪ್ರಾಮಾಣಿಕ
ವಾಗಿ ಮುಂದುವರೆಸಿಕೊಂಡು ಹೋಗುವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT