‘ಲಿಂಗಾಯತ ಧರ್ಮ ಇಂದು ಬಹಳ ಸಂದಿಗ್ಧ ಪರಿಸ್ಥಿತಿಯಲ್ಲಿದೆ. ಕಷ್ಟದ ದಿನಗಳನ್ನು ಕಳೆಯುತ್ತಿದೆ. ಸ್ವತಂತ್ರ ಧರ್ಮದ ಮಾನ್ಯತೆ ಪಡೆದುಕೊಳ್ಳಬೇಕು ಎಂದು ತೀವ್ರ ಹೋರಾಟ ನಡೆಸಿದ್ದೇವೆ. ನಮ್ಮ ದನಿಯನ್ನು ಸರ್ಕಾರಕ್ಕೆ ಮುಟ್ಟಿಸಿದ್ದೇವೆ. ಅದರ ಪರಿಣಾಮವಾಗಿ ರಾಜ್ಯ ಸರ್ಕಾರವು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸತ್ಯಶೋಧನಾ ಸಮಿತಿ ನೇಮಿಸಿ ವರದಿ ತರಿಸಿಕೊಂಡಿತ್ತು. ಅದನ್ನು ಯಥಾವತ್ತಾಗಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಟ್ಟಿದೆ. ಜನಾಭಿಪ್ರಾಯಕ್ಕೆ ಮನ್ನಣೆ ನೀಡಿದೆ. ಆದರೆ, ಒಂದೇ ಒಂದು ದಿನಪತ್ರಿಕೆಯಲ್ಲಿ, ರಾಜ್ಯ ಸಲ್ಲಿಸಿದ್ದ ವರದಿ ವಾಪಸ್ ಬಂದಿದೆ ಎಂದು ಬರೆಯಲಾಗಿದೆ. ಇದನ್ನು ಬಹಳ ಮಂದಿ ನಂಬಿಕೊಂಡಿದ್ದಾರೆ. ಆದರೆ, ಮುಖ್ಯ ಕಾರ್ಯದರ್ಶಿ ಕೇಳಿದಾಗ, ಆ ಕಡತ ವಾಪಸ್ ಬಂದಿಲ್ಲ ಎಂದು ತಿಳಿಸಿದ್ದಾರೆ. ಅಲ್ಪಸಂಖ್ಯಾತರ ಇಲಾಖೆಯ ಆಯುಕ್ತರೂ ಇದನ್ನು ಖಚಿತಪಡಿಸಿದ್ದಾರೆ’ ಎಂದು ತಿಳಿಸಿದ್ದಾರೆ.