ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಬಳಿಕ ಮೊದಲ ಬಾರಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ, ಹೆಚ್ಚುವರಿ ಮುಖ್ಯಕಾರ್ಯದರ್ಶಿ, ಪ್ರಧಾನಕಾರ್ಯದರ್ಶಿ, ಕಾರ್ಯದರ್ಶಿಗಳ ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ಜನತೆಯ ದೈನಂದಿನ ಸಂಕಷ್ಟಗಳಿಗೆ ಸ್ಪಂದಿಸಲು ಮತ್ತು ಜನಪರ ಯೋಜನೆಗಳ ಜಾರಿಗೆ ನಿಮ್ಮ ಸಹಕಾರ ಅತಿ ಮುಖ್ಯ’ ಎಂದರು.