‘ರಾಜಕೀಯ ಜೀವನದಲ್ಲಿ ಶಾಸಕನಾಗಿ, ಮಂತ್ರಿಯಾಗಿ, ಜನರ ಸೇವಕನಾಗಿ ಕೆಲಸ ಮಾಡಿದ್ದೇನೆ. ಹಿಂದೆ ಕೊಟ್ಟಂತಹ ಎರಡು ಇಲಾಖೆಗಳಲ್ಲಿ ವಿವಾದಗಳು, ಕಪ್ಪುಚುಕ್ಕೆ ಇಲ್ಲದಂತೆ ಯಶಸ್ವಿಯಾಗಿ ನಿಭಾಯಿಸಿದ್ದೇನೆ. ಕಳೆದ ಬಾರಿ ಕೂಡ ಪ್ರಥಮ ಹಂತದ ಸಂಪುಟ ವಿಸ್ತರಣೆ ವೇಳೆಯೇ ಸಚಿವ ಸ್ಥಾನ ಸಿಕ್ಕಿತ್ತು. ಪಕ್ಷ ಹಾಗೂ ಜನರು ಇಟ್ಟಿರುವ ನಂಬಿಕೆಗೆ ಅನುಗುಣವಾಗಿ ಕೆಲಸ ಮಾಡಿಕೊಂಡು ಹೋಗುತ್ತೇನೆ’ ಎಂದರು.