ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಚಿವ ಶಿವಕುಮಾರ್‌ಗೆ ಮುಂದೆ ಉನ್ನತ ಸ್ಥಾನ’

Last Updated 15 ಜೂನ್ 2018, 19:30 IST
ಅಕ್ಷರ ಗಾತ್ರ

ತುಮಕೂರು: 'ಸಚಿವ ಡಿ.ಕೆ.ಶಿವಕುಮಾರ್ ಮುಂದೊಂದು ದಿನ ಉನ್ನತ ಸ್ಥಾನಕ್ಕೆ ತಲುಪುತ್ತಾರೆ' ಎಂದು ತಿಪಟೂರು ತಾಲ್ಲೂಕಿನ ನೊಣವಿನಕೆರೆ ಕಾಡಸಿದ್ಧೇಶ್ವರಮಠದ ಕರಿವೃಷಭ ದೇಶಿಕೇಂದ್ರ ಶಿವಯೋಗಿ ಸ್ವಾಮೀಜಿ ಭವಿಷ್ಯ ನುಡಿದ್ದಾರೆ.

ಸಚಿವ ಶಿವಕುಮಾರ್ ಅವರು ಶುಭ ಕಾರ್ಯ ಕೈಗೊಳ್ಳುವ ಮೊದಲು ಈ ಸ್ವಾಮೀಜಿಗಳ ಆಶೀರ್ವಾದ ಪಡೆಯುತ್ತಾರೆ. ಈಗಿನ ರಾಜ್ಯ ರಾಜಕೀಯ ಸನ್ನಿವೇಶದಲ್ಲಿ ಶಿವಕುಮಾರ್ ಅವರ ಭವಿಷ್ಯದ ಬಗ್ಗೆ ವಾಹಿನಿಯೊಂದಕ್ಕೆ ಸ್ವಾಮೀಜಿ ಮಾತನಾಡಿದ್ದಾರೆ.

'ಖಾತೆ ಗೊಂದಲ ಹಾಗೂ ಅತೃಪ್ತಿಯನ್ನು ಬದಿಗಿರಿಸಿ ಡಿ.ಕೆ.ಶಿವಕುಮಾರ್ ಅವರು ಯಾವುದೇ ಖಾತೆ ಬಂದರೂ ಕಾಯಕವೇ ಕೈಲಾಸ ಎಂದು ಕೆಲಸ ಮಾಡಲಿ. ಈಗಿರುವ ಸ್ಥಾನದಲ್ಲಿಯೇ ಅವರು ಸಾಧನೆ ಮಾಡಲಿ. ಮುಂದೊಂದು ದಿನ ಅವರಿಗೆ ಉನ್ನತ ಸ್ಥಾನ ಲಭಿಸುತ್ತದೆ' ಎಂದು ನುಡಿದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT