‘ಲಿಂಗಾಯತ ಚಳವಳಿಯ ದನಿ ಕ್ಷೀಣಿಸಿಲ್ಲ. ಕೇಂದ್ರಕ್ಕೆ ಸಮಯ ನೀಡಿದ್ದೇವೆ. ಈ ನಡುವೆ, ರಾಜ್ಯ ಸರ್ಕಾರ ಕಳುಹಿಸಿರುವ ಶಿಫಾರಸು ಕಡತ ವಾಪಸ್ ಬಂದಿದೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ. ಅಂತಹ ಬೆಳವಣಿಗೆ ನಡೆದಿಲ್ಲ. ಶಿಫಾರಸು, ಕೇಂದ್ರದ ಅಂಗಳದಲ್ಲಿಯೇ ಇದೆ. ನಮ್ಮ ದನಿ ಅಡಗಿಸುವ ದುರುದ್ದೇಶದಿಂದ ಹಿಂದುತ್ವವಾದಿಗಳು ಹಾಗೂ ವೀರಶೈವವಾದಿಗಳ ಕೈವಾಡದಿಂದಾಗಿ ಅಪಪ್ರಚಾರ ನಡೆಯುತ್ತಿದೆ. ಇದರಿಂದ ನಮ್ಮ ಹೋರಾಟ ಮತ್ತಷ್ಟು ಬಲಗೊಳ್ಳಲಿದೆ’ ಎಂದು ಹೇಳಿದರು.