ಈ ಬಗ್ಗೆ ‘ಪ್ರಜಾವಾಣಿ’ ಜತೆ ಮಾತನಾಡಿದ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ‘ಉಪ ವಿಭಾಗಾಧಿಕಾರಿ ಬುಧವಾರ ದೇವಸ್ಥಾನಕ್ಕೆ ಭೇಟಿ ನೀಡುವ ವೇಳೆಗೆ ಸರ್ಕಾರದಿಂದ ಯಾವುದೇ ಮಾಹಿತಿ ಬಂದಿರಲಿಲ್ಲ. ಆದರೆ, ಪ್ರಕ್ರಿಯೆ ಆರಂಭವಾದ ಬಳಿಕ ಅಡ್ವೊಕೇಟ್ ಜನರಲ್ (ಎ.ಜಿ) ಅವರ ಅಭಿಪ್ರಾಯ ತೆಗೆದುಕೊಳ್ಳಲಾಗುವುದು ಎಂದು ತಿಳಿಸಲಾಯಿತು. ಹೀಗಾಗಿ ಪ್ರಕ್ರಿಯೆಯನ್ನು ರದ್ದು ಮಾಡಿದ್ದೇವೆ. ಎ.ಜಿ ಅವರ ಅಭಿಪ್ರಾಯ ತಿಳಿದುಕೊಂಡು ಮುಂದುವರಿಯುತ್ತೇವೆ’ ಎಂದು ಸ್ಪಷ್ಟಪಡಿಸಿದರು.