ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಜನಧನವಾಗಿ ಮಾರ್ಪಟ್ಟ ಕಪ್ಪುಹಣ’

Last Updated 16 ಜೂನ್ 2018, 19:37 IST
ಅಕ್ಷರ ಗಾತ್ರ

ಮುಂಬೈ: ಗರಿಷ್ಠ ಮುಖಬೆಲೆಯ ನೋಟುಗಳ ರದ್ದತಿಯ ನಿರ್ಧಾರವು ಈಗ ಫಲ ನೀಡುತ್ತಿದೆ ಎಂದು ಕೇಂದ್ರ ಸರ್ಕಾರ ಹೇಳಿಕೊಂಡಿದೆ.

‘ಬಚ್ಚಿಟ್ಟಿದ್ದ ಹಣವು ಈಗ ಉತ್ಪಾದನಾ ಉದ್ದೇಶಕ್ಕೆ ಸದ್ಬಳಕೆ ಆಗುತ್ತಿದೆ. ಯಾವುದೇ ಉದ್ದೇಶಕ್ಕೆ ಬಳಕೆಯಾಗದೆ ನಿರುಪಯುಕ್ತವಾಗಿದ್ದ ಹಣ ಈಗ ಬ್ಯಾಂಕಿಂಗ್‌ ವ್ಯವಸ್ಥೆಗೆ ಬಂದಿದೆ. ಈ ಹಣವನ್ನು ಈಗ ದೇಶದ ಅಭಿವೃದ್ಧಿ ಉದ್ದೇಶಕ್ಕೆ ಬಳಸಲಾಗುತ್ತಿದೆ’ ಎಂದು ಕೇಂದ್ರದ ಹಣಕಾಸು ರಾಜ್ಯ ಸಚಿವ ಶಿವ ಪ್ರತಾಪ್‌ ಶುಕ್ಲಾ ಹೇಳಿದ್ದಾರೆ.

ನೋಟು ರದ್ದತಿಯ ಆರಂಭಿಕ ದಿನಗಳಲ್ಲಿ ಜನರು ತೀವ್ರ ಸಂಕಷ್ಟ ಎದುರಿಸಿದ್ದರು ಎಂಬುದನ್ನು ಒಪ್ಪಿಕೊಂಡಿರುವ ಅವರು, ಸರ್ಕಾರ ಕೂಡ ಟೀಕೆಗೆ ಗುರಿಯಾಗಿತ್ತು. ಈ ನಿರ್ಧಾರವು ಸರ್ಕಾರದ ವೈಫಲ್ಯವಲ್ಲ ಎಂದು ಅವರು ಪುನರುಚ್ಚರಿಸಿದರು.

‘ಕಪ್ಪು ಹಣವು ಈಗ ಜನ ಧನವಾಗಿ (ಜನರ ಸಂಪತ್ತಾಗಿ) ಮಾರ್ಪಟ್ಟಿದೆ’ ಎಂದೂ ಶುಕ್ಲಾ ಹೇಳಿದರು. ವಿಮೆ ಕುರಿತ ಸಮಾವೇಶದಲ್ಲಿ ಅವರು ಮಾತನಾಡುತ್ತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT